ಉಡುಪಿ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಕಾಂತಾರ ಚಿತ್ರದ ನಟ, ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಅಗಲಿ ಎರಡು ದಿನ ಕಳೆದರೂ ಕೂಡ ರಾಕೇಶ್ ಪೂಜಾರಿ ಮನೆಗೆ ಡಿವೈನ್ ಸ್ಟಾರ್ ಭೇಟಿ ನೀಡಿಲ್ಲ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ರಾಕೇಶ್ ಪೂಜಾರಿ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದರು.

ತನ್ನ ಚಿತ್ರತಂಡದ ಕಲಾವಿದನ ಅಂತಿಮ ದರ್ಶನ ಪಡೆಯಲು ಡಿವೈನ್ ಸ್ಟಾರ್ ಆಗಮಿಸಿರಲಿಲ್ಲ ಜೊತೆಗೆ ಈಗಲೂ ಅವರ ಮನೆಗೆ ಭೇಟಿ ನೀಡಿಲ್ಲ “ಕಲಾವಿದನಿಗಿಂತ ಕಮರ್ಶಿಯಲ್ ಹೆಚ್ಚಾಯ್ತಾ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸದ್ಯ ಉಡುಪಿಯ ಬೈಂದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರೀಕರಣವಾಗುತ್ತಿದ್ದು, ರಾಕೇಶ್ ನ ಉಡುಪಿಯ ಹೂಡೆ ನಿವಾಸಕ್ಕೆ ಒಮ್ಮೆಯೂ ಭೇಟಿ ನೀಡದ ಹಿನ್ನಲೆ ಆಕ್ರೋಶ ವ್ಯಕ್ತವಾಗಿದೆ.

ಸಹ ಕಲಾವಿದನ ಜೀವಕ್ಕೆ ಇಷ್ಟೇನಾ ಬೆಲೆ. ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆಯಲು ಬೆಂಗಳೂರಿನಿಂದ ರಕ್ಷಿತಾ ಪ್ರೇಮ್, ಯೋಗರಾಜ್ ಭಟ್, ಮಾಸ್ಟರ್ ಆನಂದ್, ಅನುಶ್ರೀ ಸೇರಿದಂತೆ ಅನೇಕರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ ಆದರೆ ಉಡುಪಿ ಬೈಂದೂರು ಸಮೀಪವಿದ್ದರೂ ರಿಷಬ್ ಶೆಟ್ಟಿ ಆಗಮಿಸಿಲ್ಲ. 500 ಕಿಮಿ ದೂರದಿಂದ ಬಂದವರ ನಡುವೆ 30 ಕಿಮಿ ದೂರದಲ್ಲಿದ್ದು ಬರಲು ಪುರಸೊತ್ತು ಇಲ್ಲವೇ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.