ಬೆಂಗಳೂರು: ರಾಜ್ಯದಲ್ಲಿ ಹಲವಡೆ ಲೋಕಾಯುಕ್ತ ಅಧಿಕಾರಿಗಳು 7 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿಯನ್ನು ನಡೆಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಭೋಧನ ಹೊಸಹಳ್ಳಿ ಗ್ರಾಮದ ಎಸ್.ಡಿಎ ಅಧಿಕಾರಿ ಅನಂತ್ ಮನೆ ಮೇಲೆ ರೇಡ್ ಮಾಡಲಾಗಿದೆ. ಎಸ್ಪಿ ನೇತೃತ್ವದ 8 ಜನರ ತಂಡದಿಂದ ರೇಡ್ ಮಾಡಿದ್ದು, ಅಧಿಕಾರಿ ಅನಂತ್ ಮನೆಯಲ್ಲಿ ಮೂರು ಲಕ್ಷ ನಗದು, 11 ಚಿನ್ನದ ಉಂಗುರ, ಎರಡು ಬ್ರಾಸ್ ಲೈಟ್, ಎರಡು ಕೆಜಿಗೂ ಅಧಿಕ ಬೆಳ್ಳಿ, ಚಿನ್ನದ ಡಾಬು ಸೇರಿದಂತೆ ಲಕ್ಷಾಂತರ ಚಿನ್ನಾಭರಣಗಳು ಪರಿಶೀಲನೆಯಲ್ಲಿ ಪತ್ತೆಯಾಗಿದೆ.

ಹೊಸಕೋಟೆ ತಾಲೂಕು ಕಚೇರಿಯ ಭೂ ಮಂಜೂರಾತಿ ಸೆಕ್ಷನ್ ನಲ್ಲಿ ಆನಂತ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ.