ಕೊರೊನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಜನ ಅತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈಗಾಗಲೇ ಇಲಾಖೆಯ ವತಿಯಿಂದ ಸಭೆಗಳನ್ನು ನಡೆಸಿದ್ದು, ನಿನ್ನೆ ಸಂಜೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಹಲವು ವಿಚಾರಗಳ ಬಗ್ಗೆ ಮಾಹಿತಿ ಸಿಕ್ಕಿದೆ. ನಾಳೆಯಿಂದ ಇಲಾಖೆಯ ವತಿಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಗೆ ನಿರ್ಧಾರ, ಇಂದಿನಿಂದ 8 ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಪರೀಕ್ಷೆಗೆ ಇಲಾಖೆ ನಿರ್ಧಾರ ತೆಗೆದುಕೊಂಡಿರುವ ಮಾಹಿತಿ ಸಿಕ್ಕದ್ದು, ಜನರ ಅತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.