ನಟ ಕಮಲ್ ಹಾಸನ್ ಉಡಾಫೆ ಹೇಳಿಕೆ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ರಿಯಾಕ್ಟ್ ಮಾಡಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಹುಟ್ಟು ಹಬ್ಬ ಆಚರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿರುವ ಹೇಳಿಕೆ ತಪ್ಪು. ಭಾಷೆಯ ಬಗ್ಗೆ ಮಾತನಾಡುವಾಗ ಸ್ವಲ್ಪ ಯೋಚಿಸಿ ಮಾತನಾಡಬೇಕು. ನಾವ್ಯಾರು ಪಂಡಿತರಲ್ಲ. ಯಾವ ಭಾಷೆಯಿಂದ ಯಾವ ಭಾಷೆ ಅಂತ ಹೇಳೋಕೆ ಬರಲ್ಲ. ಹಿರಿಯ ನಟರಾಗಿ ಸ್ವಲ್ಪ ಯೋಚಿಸಿ ಮಾತನಾಡಬೇಕು. ಯಾರೊಬ್ಬರ ಹೇಳಿಕೆಯಿಂದ ಕನ್ನಡದ ಘನತೆ ಕಡಿಮೆ ಆಗಲ್ಲ. ಕನ್ನಡದ ಭಾಷೆಗೆ ಅದರದ್ದೇ ಆತ ಇತಿಹಾಸವಿದೆ.
ಅಪಮಾನ ಮಾಡುವುದು ಸರಿಯಲ್ಲ. ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ಇರಬೇಕು. ಯಾವ ಭಾಷೆಯಿಂದ ಯಾವ ಭಾಷೆ ಬಂದಿದೆ ಎನ್ನುವುದು ಯಾರಿಗೂ ತಿಳಿಯುತ್ತಿಲ್ಲ. ಕನ್ನಡಕ್ಕೆ ಅಪಮಾನವಾದರೆ ಕನ್ನಡಿಗರು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ನಟ ದಿ. ಅಂಬರೀಶ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಂಬಿ ನೆನೆದು ಭಾವುಕರಾಗಿದ್ದಾರೆ.