ಐಪಿಎಲ್ ಶುರುವಾಗಿಬಿಟ್ಟರೆ ಸಾಕು, ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಅದರಲ್ಲೂ ಆರ್ ಸಿಬಿ ಅಭಿಮಾನಿಗಳಂತೂ ಪ್ರತಿ ಪಂದ್ಯವನ್ನೂ ಹಬ್ಬದಂತೆ ಸ್ವಾಗತಿಸುತ್ತಾರೆ. ಎಷ್ಟೇ ಬಾರಿ ಸೋತರೂ ಈ ಸಲ ಕಪ್ ನಮ್ದೆ ಅಂತಾ ಹೇಳೊ ಜೋಶ್ ಮಾತ್ರ ಆರ್ ಸಿಬಿಯಿಂದ ದೂರವಾಗಿಲ್ಲ. ಈ ಬಾರಿ ಕಪ್ ಗೆಲ್ಲುವ ಅವಕಾಶವಿದ್ದು, ಅಭಿಮಾನಿಗಳು ಸಂತಸ ಪಡುತ್ತಿದ್ದಾರೆ.

ಆರ್ಸಿಬಿ ಫ್ಯಾನ್ಸ್ ಗಳ ಕನಸು ನೆರವೇರುವುದಕ್ಕೆ ಇನ್ನೊಂದೆ ಮೆಟ್ಟಿಲು ಬಾಕಿ ಇದೆ. ನಿನ್ನೆ ಪ್ಲೇ ಆಫ್ನಲ್ಲಿ ಪಂಜಾಬ್ಗೆ ಸೋಲುಣಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಫೈನಲ್ ಪ್ರವೇಶಿಸಿದೆ. ಅಭಿಮಾನಿಗಳಿಗೆ ಎಲ್ಲಿಲ್ಲದ ಖುಷಿಯನ್ನು ಇದು ನೀಡಿದೆ. ಹೀಗಿರುವಾಗ ಬೆಳಗಾವಿಯ ಯುವಕನೋರ್ವ ಆರ್ಸಿಬಿ ಗೆದ್ದರೆ ಆ ದಿನವನ್ನು RCB ಫ್ಯಾನ್ಸ್ ಹಬ್ಬ ಮತ್ತು ಒಂದು ದಿನ ರಜೆ ಘೋಷಣೆ ಮಾಡುವಂತೆ ಸಿಎಂಗೆ ಪತ್ರ ಬರೆದಿದ್ದಾರೆ.
ಈ ಪತ್ರ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಆರ್ಸಿಬಿ ಫ್ಯಾನ್ಸ್ ಮನ ಗೆದ್ದಿದೆ. ಐಪಿಎಲ್ ಪಂದ್ಯದಲ್ಲಿ ಒಂದು ವೇಳೆ ಆರ್ಸಿಬಿ ತಂಡ ಫೈನಲ್ಗೆ ಹೋಗಿ ಕಪ್ ಗೆದ್ದರೆ, ಆ ದಿನ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ‘ಕರ್ನಾಟಕ ರಾಜ್ಯ ಆರ್ ಸಿಬಿ ಫ್ಯಾನ್ಸ್ ಹಬ್ಬ’ ಅಂತ ಅಧೀಕೃತವಾಗಿ ಘೋಷಿಸಿ ಪ್ರತಿವರ್ಷ ಸರ್ಕಾರ ರಜೆ ನೀಡಬೇಕು. ಏಕೆಂದರೆ ಆರ್ಸಿಬಿ ಫ್ಯಾನ್ಸ್ಗಳ ಬಹುದಿನದ ಕನಸು ನನಸಾಗಲಿದ್ದು, ಕರ್ನಾಟಕ ರಾಜ್ಯೋತ್ಸವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸುತ್ತೇವೋ ಅದೇ ರೀತಿ ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸುವುದಕ್ಕೆ ಕರ್ನಾಟಕ ಸರ್ಕಾರ ಅನುವು ಮಾಡಿಕೊಡಬೇಕೆಂದು ವಿನಂತಿ ಮಾಡಿಕೊಳ್ಳುತ್ತೇವೆ. ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.