ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಉಡುಪಿ, ಗದಗ, ಧಾರವಾಡ ಸೇರಿದಂತೆ 7 ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ದೇವರಾಜು ಅರಸು ಅಭಿವೃದ್ಧಿ ನಿಗಮದ ಬೆಳಗಾವಿ ಜಿಲ್ಲಾ ಮ್ಯಾನೇಜರ್ ದೇವರಾಜ್ ಅರಸು, ಬಾಗಲಕೋಟೆಯ ಎಫ್ ಡಿಎ ಶೈಲಸುಭಾಷ್ ತತ್ರಾಣಿ, ಬಳ್ಳಾರಿಯ ಪಿಡಬ್ಲ್ಯೂಡಿ ಇಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ಶಿಗ್ಗಾಂವಿ ಪಿಡಿಒ ರಾಮಕೃಷ್ಣ, ಕಾರ್ಕಳ ಬೆಸ್ಕಾಂ ಅಕೌಂಟೆಂಟ್ ಗಿರೀಶ್ ರಾವ್, ಗದಗ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಡೈರೆಕ್ಟರ್ ಗಂಗಾಂಧರ್ ಶಿರೋಳ್, ಧಾರವಾಡದ ಪಿಡಬ್ಲ್ಯೂಡಿ ಚೀಫ್ ಇಂಜಿನಿಯರ್ ಹೆಚ್. ಸುರೇಶ್ ನಿವಾಸ ಸೇರಿದಂತೆ ಸಂಬಂಧಿಸಿದ ಪ್ರದೇಶಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.