ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಶಾಸಕ ಮುನಿರತ್ನ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಪ್ರತಿವಾದಿ ಸಿಐಡಿ ಎಸ್ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ. ಸಂತ್ರಸ್ತೆಯನ್ನು ಪ್ರತಿವಾದಿಯಾಗಿ ಮಾಡಲಾಗಿದೆ.
ಹಿಂದೆ ನಾನು ಬಿಜೆಪಿಯಲ್ಲಿದ್ದ ಕಾರಣಕ್ಕೆ ಕಾಂಗ್ರೆಸ್ ನಲ್ಲಿದ್ದ ಶಾಸಕ ಮುನಿರತ್ನ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಕಳುಹಿಸಿದ್ದರು. 2023ರ ಜೂನ್ 11ರಂದು ಜೆ.ಪಿ.ಪಾರ್ಕ್ ಬಳಿಯಿರುವ ಶಾಸಕರ ಕಚೇರಿಯ ಎರಡನೇ ಮಹಡಿಗೆ ಕರೆದೊಯ್ದು ಬೆತ್ತಲೆಗೊಳಿಸಿ, ತಮ್ಮಿಬ್ಬರು ಸಹಚರರಿಂದ ಸಾಮೂಹಿಕ ಅತ್ಯಾಚಾರ ಮಾಡಿಸಿದ್ದರು. ಆನಂತರ ಬೆದರಿಕೆ ಹಾಕಿದ್ದರು ಎಂದು 40 ವರ್ಷದ ಮಹಿಳೆ ದೂರು ನೀಡಿದ್ದರು. ದೂರಿನ ಅನ್ವಯ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರ ವಿರುದ್ಧ ಆರ್ಎಂಸಿ ಯಾರ್ಡ್ ಠಾಣೆಯಲ್ಲಿಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಎಸ್ ಐಟಿ ನಡೆಸುತ್ತಿದೆ.
ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪತಿಯನ್ನು ‘ಹನಿಟ್ರ್ಯಾಪ್’ ಮಾಡಲೆತ್ನಿಸಿದ ಆರೋಪವೂ ಮುನಿರತ್ನ ವಿರುದ್ಧ ಕೇಳಿ ಬಂದಿತ್ತು.