ಬೈಕ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಜೆ.ಪಿ ಹುಂಡಿ ಬಳಿ ನಡೆದಿದೆ. ಹಂಚಿಪುರ ಗ್ರಾಮದ ನಿವಾಸಿಗಳಾದ ಚೆನ್ನಮಲ್ಲಮ್ಮ, ಮಂಗಳು ರೂಪ, ಅಳಿಯ ಚಿನ್ನಸ್ವಾಮಿ ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ.
ಸಾವನ್ನಪ್ಪಿದವರು ಮಾದನಹಳ್ಳಿಯಿಂದ ತಮ್ಮ ಊರಿಗೆ ತೆರೆಳ್ಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹುಲ್ಲಹಳ್ಳಿಯಿಂದ ಸಂಗಮ ಕಡೆಗೆ ತೆರಳುತ್ತಿತ್ತು. ಈ ವೇಳೆ ದಾರಿ ಮಧ್ಯೆ ಜೆಪಿ ಹುಂಡಿ ಬಳಿ ಅಪಘಾತ ಸಂಭವಿಸಿದೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.