ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಅಭಿಮಾನಿಗಳು ಮಾತ್ರ ಗಾಯಗೊಂಡಿಲ್ಲ. ಪೊಲೀಸರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಗಾಯಗೊಂಡಿದ್ದಾರೆ. ಹೀಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈದಾನದ ಯಾವುದೇ ಗೇಟ್ ನಲ್ಲಿಯೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿರಲಿಲ್ಲ. ಹೀಗಾಗಿ ಜನರು ಒಮ್ಮೆಲೇ ಗೇಟ್ ಕಡೆಗೆ ನುಗ್ಗಿದ್ದಾರೆ. ಗೇಟ್ ನಂ.19 ರ ಬಳಿ ಯಾವುದೇ ಪೊಲೀಸರನ್ನು ನಿಯೋಜಿಸಿರಲಿಲ್ಲ. ಜನ ನುಗ್ಗಿದ್ದಾರೆ. ಆ ವೇಳೆ ಡಿಸಿಪಿ ಒಬ್ಬರೇ ಇದ್ದು ಗುಂಪು ಚದುರಿಸಲು ಹರಸಾಹಸ ಪಟ್ಟಿದ್ದಾರೆ. ತಾವೇ ಲಾಠಿ ಹಿಡಿದು ಗಂಪು ಚದುರಿಸಲು ಮುಂದಾಗಿದ್ದಾರೆ. ಹೀಗಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.