ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ದುರಂತದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಈ ಕುರಿತು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಜೂನ್ 4 ರಂದು ಕಾಲ್ತುಳಿತ ಸಂಭವಿಸಿತ್ತು. ಆನಂತರ ರಾಜ್ಯದಲ್ಲಿ ಮಡುಗಟ್ಟಿದ ಮೌನ ಆವರಿಸಿದೆ. ಶಿವಮೊಗ್ಗ ಜಿಲ್ಲೆಯ ಎಚ್.ಎಂ. ವೆಂಕಟೇಶ್ ಎಂಬುವವರು ವಿರಾಟ್ ಕೊಹ್ಲಿಯಿಂದಲೇ ಕಾಲ್ತುಳಿತ ಸಂಭವಿಸಿತು ಎಂದು ಕಬ್ಬನ್ ಪಾರ್ಕ್ ನಲ್ಲಿ ದೂರು ನೀಡಿದ್ದರು. ಆದರೆ, ಪೊಲೀಸರು ದೂರು ದಾಖಲಿಸಿಲ್ಲ, ಈಗಾಗಲೇ ದಾಖಲಾದ ಪ್ರಕರಣದ ಜೊತೆ ತನಿಖೆ ಮಾಡುತ್ತೇವೆ ಎಂದಿದ್ದಾರೆ.
ಈಗಾಗಲೇ ಪ್ರಕರಣ ದಾಖಲಾಗಿದೆ. ಅದರ ತನಿಖೆಯ ಭಾಗವಾಗಿಯೇ ವೆಂಕಟೇಶ್ ನೀಡಿದ ದೂರನ್ನೂ ಪರಿಶೀಲಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ