ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶ್, ರಾಜ್ಯ ಸರ್ಕಾರ ಈಗಾಗಲೇ ಹಿಂದುಳಿದ ವರ್ಗಗಳಿಗೆ ಒಂದು ಕೋಟಿ ಅಷ್ಟು ಗುತ್ತಿಗೆ ಮೀಸಲಾತಿ ನೀಡಿದೆ. ಆದರೆ, ಕೆಲ ಇಲಾಖೆಯಲ್ಲಿ ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ. ಅಂತಹ ಇಲಾಖೆ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿಎಂ ಹಾಗೂ ಡಿಸಿಎಂ ಮೀಸಲಾತಿ ನೀಡಿದರೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಗೆ ಸಹಕಾರ ಅಗುತ್ತೆ. ರಾಜ್ಯ ಸರ್ಕಾರ ಒಂದು ಕೋಟಿ ಗುತ್ತಿಗೆಯನ್ನು ಎರಡು ಕೋಟಿಗೆ ಏರಿಕೆ ಮಾಡಬೇಕು ಅಂತ ಮನವಿ ಮಾಡಿದ್ದಾರೆ.