ಚಿಕ್ಕಬಳ್ಳಾಪುರ: ಆರ್ ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತ ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರವಣ್ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ಇಂದು ಚೆಕ್ ನೀಡಿದ್ದಾರೆ.
ಚಿಂತಾಮಣಿ ತಾಲ್ಲೂಕಿನ ಕುರುಟಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಭೇಟಿ ನೀಡಿ ಚೆಕ್ ವಿತರಿಸಿದ್ದಾರೆ. ಈ ವೇಳೆ ಪೋಷಕರಿಗೆ ಸಾಂತ್ವಾನ ಹೇಳಿದ ಜಿಲ್ಲಾಧಿಕಾರಿ ಪಿಎನ್ ರವೀಂದ್ರ, ಇಪ್ಪತೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಜಿಲ್ಲಾಧಿಕಾರಿಗೆ ತಾಲ್ಲೂಕು ಆಡಳಿತ ಅಧಿಕಾರಿಗಳು ಸಾಥ್ ನೀಡಿದ್ದರು. ಜಿಲ್ಲಾಧಿಕಾರಿಯಿಂದ ಚೆಕ್ ಸ್ವೀಕರಿಸಿದ ಮೃತ ಶ್ರವಣ್ ತಂದೆ ತಿಮ್ಮಯ್ಯ ಹಾಗೂ ತಾಯಿ ಲಕ್ಷ್ಮೀದೇವಿ ಧನ್ಯವಾದ ತಿಳಿಸಿದ್ದಾರೆ.