ಚಿಕ್ಕಬಳ್ಳಾಪುರ : ನಾನು ಶಾಸಕನಾಗಿರುವಾಗ ನಮ್ಮ ಜಿಲ್ಲೆಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯುತ್ತಿರುವುದು ನನ್ನ ಸೌಭಾಗ್ಯ ಎಂದು ಚಿಕ್ಕಬಳ್ಳಾಪುರ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದ್ದಾರೆ.
ಜೂನ್ 19 ರಂದು ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಾಸಕನಾಗಿರುವಾಗ ಕ್ಯಾಬಿನೆಟ್ ಮೀಟಿಂಗ್ ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ನನ್ನ ಸೌಭಾಗ್ಯ. ಮೂರು ಜಿಲ್ಲೆಗಳಿಗೆ ಈ ಕ್ಯಾಬಿನೆಟ್ ಮೀಟಿಂಗ್ ವರದಾನವಾಗಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಜಕ್ಕಲಮೊಡುಗು ಜಲಾಶಯ ಅಭಿವೃದ್ದಿಗೆ ಬೇಡಿಕೆಯನ್ನು ಇಡಲಾಗಿದೆ. ಎತ್ತಿನ ಹೊಳೆ ನೀರು ಶೇಖರಣೆ ಬಗ್ಗೆ ಈಗಾಗಲೇ ಚರ್ಚೆಯನ್ನು ಮಾಡಲಾಗಿದೆ. ಮೂರು ಜಿಲ್ಲೆಗಳ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ಯಾವತ್ತೂ ಸುಳ್ಳು ಮಾಡುವುದಿಲ್ಲ ಎಂದು ತಿಳಿಸಿದರು.