ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಪರಿಸರ ನಡಿಗೆ ಕಾರ್ಯಕ್ರಮಕ್ಕೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
ಈ ವೇಳೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಪರಿಸರಕ್ಕಾಗಿ ನಡಿಗೆ ಕಾರ್ಯಕ್ರಮದಲ್ಲಿ ನಾವೆಲ್ಲ ಭಾಗವಹಿಸುತ್ತಿದ್ದೇವೆ. ಈ ನಡಿಗೆಯಲ್ಲಿ ಐದು ಸಾವಿರ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ನಾವೆಲ್ಲರೂ ಹವಾಮಾನ ಬದಲಾವಣೆ ನಮಗೆ ದೊಡ್ಡ ಸವಾಲಾಗಿದೆ. ಇದರಿಂದ ಪ್ರಕೃತಿ ವಿಕೋಪ ಆಗುತ್ತಿದೆ. ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ಅನೇಕ ಕಡೆ ಗುಡ್ಡ ಕುಸಿತ, ಪ್ರವಾಹ ಆಗುತ್ತಿದೆ.
ಮುಂದಿನ ಪಿಳೀಗೆಗೆ ಆರೋಗ್ಯಕರವಾದ ಭೂಮಿ ಹಸ್ತಾಂತರ ಮಾಡಬೇಕು. ಹೀಗಾಗಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವರು ಇದ್ದರು.