ಶಿರಾಡಿ ಮತ್ತು ಚಾರ್ಮಾಡಿ ಘಾಟ್ ಗಳಲ್ಲಿ ಭಾರೀ ಗುಡ್ಡ ಕುಸಿತದ ಭೀತಿ ಆವರಿಸಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡಿನಲ್ಲಿ ಭಾರೀ ವರ್ಷಧಾರೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಘಾಟ್ ಗಳಲ್ಲಿ ಗುಡ್ಡ ಕುಸಿಯುವ ಸಾಧ್ಯತೆಗಳಿವೆ ಎಂಬ ಸುಳಿವು ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆದರೆ, ಘಾಟ್ ಗಳು ಬರುವ ತಾಲೂಕುಗಳ ವ್ಯಾಪ್ತಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ವಿಜಯಪುರ, ಕಲಬುರ್ಗಿ, ಬೀದರ್, ಕೊಪ್ಪಳ, ಬಳ್ಳಾರಿಯಲ್ಲೂ ಮಳೆ ಮುನ್ಸೂಚನೆ ಇದ್ದು, ಹಾವೇರಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡದಲ್ಲಿ ಯೆಲ್ಲೋ ಅಲರ್ಟ್ ಡಿಕ್ಲೇರ್ ಮಾಡಲಾಗಿದೆ. ಉಳಿದಂತೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಶೀತ ವಾತಾವರಣ ಮುಂದುವರಿಯಲಿದೆ ಅಂತಾ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.