ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ ಕೇಂದ್ರ ಕಚೇರಿಯಲ್ಲಿ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮಾಜಿ ಸಂಸದ ಡಿ.ಕೆ. ಸುರೇಶ್ ಈಗಾಗಲೇ ಕನಕಪುರ ತಾಲ್ಲೂಕು ಹಾಲು ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದಾರೆ. ಮೇ 25ರಂದು ನಡೆದ ಬಮೂಲ್ ನಿರ್ದೇಶಕರ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಗೆಲುವು ಸಾಧಿಸಿದ್ದರು. ಒಟ್ಟು 14 ನಿರ್ದೇಶಕರ ಸ್ಥಾನಕ್ಕೆ ಎಲೆಕ್ಷನ್ ನಡೆದಿತ್ತು. ಈ ಪೈಕಿ 11 ನಿರ್ದೇಶಕ ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸಿದ್ದರು. ಇದರಲ್ಲಿ ಅವಿರೋಧವಾಗಿ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದರು.
ಈಗ ನಿರ್ದೇಶಕ ಸ್ಥಾನದಿಂದ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಬಹುತೇಕವಾಗಿ ಡಿ.ಕೆ. ಸುರೇಶ್ ಬಮೂಲ್ ಅಧ್ಯಕ್ಷ ಸ್ಥಾನದ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ. ಬುಮೂಲ್ ನಲ್ಲಿ ಹೆಚ್ಚು ನಿರ್ದೇಶಕರ ಸ್ಥಾನಗಳನ್ನು ಕಾಂಗ್ರೆಸ್ ಹೊಂದಿರುವುದು ಡಿಕೆ ಸುರೇಶ್ ಗೆ ಬಲ ತಂದಿದೆ.