ಬೆಂಗಳೂರು: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿನ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ, ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಕೂಡ ದಾಳಿ ನಡೆದಿದೆ.
ಎಲ್ಲೆಲ್ಲಿ ಲೋಕಾಯುಕ್ತ ದಾಳಿ?
• ಪ್ರಕಾಶ್ ಎಇ, ಬಿಬಿಎಂಪಿ, ಗೋವಿಂದರಾಜನಗರ, ಬೆಂಗಳೂರು.
• ಡಾ , ಎಸ್ ಪ್ರದೀಪ್, ಅಸೋಸಿಯೇಟ್ ರಿಸರ್ಚ್ ಡೈರೆಕ್ಟರ್ , ಅರ್ಗ್ಯಾನಿಕ್ ಫಾರ್ಮಿಂಗ್ ಶಿವಮೊಗ್ಗ.
• ಡಾ. ಎಸ್. ಪ್ರದೀಪ್, ಸಹಾಯಕ ಸಂಶೋಧನಾ ನಿರ್ದೇಶಕರು, ಅರ್ಗಾನಿಕ್ ಫಾರ್ಮಿಂಗ್ ಶಿವಮೊಗ್ಗ
• ಲತಾ ಮಣಿ, ಖಾತೆ ಅಧಿಕಾರಿ, ಯೌನ್ ನಗರಪಾಲಿಕೆ, ಚಿಕ್ಕಮಗಳೂರು.
• ಕೆ.ಜಿ. ಅಮರನಾಥ್, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ, ಆನೆಕಲ್.
• ಧ್ರುವರಾಜ್, ಪಟ್ಟಣ ಪೊಲೀಸ್ ನಿರೀಕ್ಷಕ, ಗದಗ.
• ಅಶೋಕ್ ವಾಲ್ಸಂದ್, ಎಂಜಿನಿಯರ್, ಮಲಪ್ರಭಾ ಯೋಜನೆ, ಧಾರವಾಡ.
• ಮಲ್ಲಿಕಾರ್ಜುನ ಅಲಿಪುರ, ಮಾಜಿ ಎಂಜಿನಿಯರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಲಬುರ್ಗಿ
• ರಾಮಚಂದ್ರ, ಪಿಡಿಒ, ಕಲಬುರ್ಗಿ
ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.