ಕಲುಷಿತ ನೀರು ಸೇವಿಸಿ ಮೂವರು ಸಾವುನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ.
ಕಳೆದ ಹತ್ತು ದಿನಗಳ ಹಿಂದೆ ಕಲುಷಿತ ನೀರು ಸೇವಸಿದ್ದ ಗ್ರಾಮಸ್ಥರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಮೂವರು ಅಸ್ವಸ್ಥರು ಸಾವನ್ನಪ್ಪಿದ್ದು, ಆರು ಜನರ ಸ್ಥಿತಿ ಗಂಭೀರವಾಗಿದೆ. ದೇವಿಕೆಮ್ಮ ಹೊಟ್ಟಿ(48) ವೆಂಕಮ್ಮ (60) ರಾಮಣ್ಣ ಪೂಜಾರಿ(50) ಸಾವನ್ನಪ್ಪಿದ್ದಾರೆ.
ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ಸ್ಥಳಕ್ಕೆ ಸುರಪುರ ಡಿಹೆಚ್ಓ ರಾಜಾ ವೆಂಕಟಪ್ಪ ನಾಯಕ ಭೇಟಿ, ಪರಿಶೀಲನೆ ನಡೆಸಿದ್ದು, ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.