ಡಿಕೆ ಶಿವಕುಮಾರ್ ಸಿಎಂ ಆಗಲಿ ಅಂತಾ ಕೇಳೋದು ತಪ್ಪಲ್ಲ. ಆದ್ರೆ, ರಾಜ್ಯದಲ್ಲಿ ಸಿದ್ದರಾಮಯ್ಯರೇ ಮುಂದಿನ ಪೂರ್ಣಾವಧಿ ಸಿಎಂ ಆಗಿರ್ತಾರೆ. ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲಾ. ಹಾಗಂತಾ ಸಿಎಂ ಬದಲಾವಣೆ ನಿರ್ಧಾರವನ್ನ ಹೈಕಮಾಂಡ್ ಅಂತಿಮಗೊಳಿಸುತ್ತೆ ಅಂತಾ ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, ಸೆಪ್ಟಂಬರ್ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ ಈ ಬಗ್ಗೆ ರಾಜಣ್ಣನವರನ್ನೇ ಕೇಳ್ಬೇಕು ಎಂದಿದ್ದಾರೆ. ಇನ್ನು ಸಿದ್ದರಾಮಯ್ಯ ಕರ್ನಾಟಕದ ಸಿಎಂ ಆಗಿರುವ ಹಿನ್ನಲೆಯಲ್ಲೇ, ಅವರನ್ನು ಒಬಿಸಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಅಂತಲೂ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.



















