ಮೈಸೂರಿನಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಕಾರ್ಯಕ್ರಮವಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಸ್ಪಷ್ಟಪಡಿಸಿದ್ಧಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಸಿದ್ದರಾಮಯ್ಯ ಅವರಿಗೆ 2023ರಲ್ಲೇ ಶಕ್ತಿ ತುಂಬಿದ್ದಾರೆ. ಶಕ್ತಿ ಕಾರ್ಯಕ್ರಮಗಳು ಈಗಾಗಲೇ ಯಶಸ್ವಿ ಆಗಿದೆ. ಸಾಧನಾ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.
ಸುರ್ಜೇವಾಲಾ ಅವರು ಸೂಪರ್ ಸಿಎಂ ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸಿದ್ದರಾಮಯ್ಯ ಒಬ್ಬರೇ ಸಿಎಂ ಎಂದು ಹೇಳಿದ್ದಾರೆ. ಬೇರೆ ಯಾತೂ ಸಿಎಂ ಇಲ್ಲ. ಸುರ್ಜೇವಾಲಾ ನಮ್ಮ ಪಕ್ಷದ ವರಿಷ್ಠರು. ಅವರು ಸಿಎಂ ಅವರನ್ನು ಕರೆದು ಸಲಹೆ ನೀಡುವ ಹಕ್ಕಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


















