‘ಪರಶುರಾಮನ ಕಂಚಿನ ಮೂರ್ತಿ ನಿರ್ಮಾಣ ಮಾಡಿದ್ದೇನೆ ಎಂದು ಹೇಳಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಸಚಿವರನ್ನು ಕರೆಸಿ ನಕಲಿ ಮೂರ್ತಿ ಉದ್ಘಾಟನೆ ಮಾಡಿಸಿ ರಾಜ್ಯದ್ರೋಹ ಎಸಗಿದ್ದಾರೆ’ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಆರೋಪಿಸಿದ್ದಾರೆ.
ಕಾರ್ಕಳದಲ್ಲಿ ಮಾತನಾಡಿದ ಅವರು, ‘ಶಾಸಕರ ತಪ್ಪಿನಿಂದಾಗಿ ಸರ್ಕಾರಿ ಅಧಿಕಾರಿಗಳು ಶಿಕ್ಷೆ ಅನುಭವಿಸುವಂತಾಗಿದೆ’ ಎಂದಿದ್ದಾರೆ. ಸುನಿಲ್ ಕುಮಾರ್ ಅವರು ಕಾರ್ಕಳದ ಜನರ ಕ್ಷಮೆ ಯಾಚಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.



















