ರಾಜ್ಯ ಸರ್ಕಾರದಿಂದ ಇಂದು ಸಾಧನಾ ಸಮಾವೇಶ ಆಯೋಜನೆಗೆ ಸರ್ಕಾರಕ್ಕೆ ಬಿಜೆಪಿ ನಾಯಕರು ಟಕ್ಕರ್ ಕೊಟ್ಟಿದ್ದಾರೆ.
ಒಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಾಧನಾ ಸಮಾವೇಶದಲ್ಲಿ ತೊಡಗಿದ್ದರೇ, ಇತ್ತ ರಾಜ್ಯ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಈವರೆಗಿನ ಆಡಳಿತಾವಧಿಯ ಎಡವಟ್ಟುಗಳನ್ನು ಬಿಚ್ಚಿಡಲು ಮುಂದಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್ಶೀಟ್ ಬಿಡುಗಡೆ ಮಾಡಲು ಮುಂದಾಗಿದ್ದು, ಎರಡು ವರ್ಷಗಳಲ್ಲಿ ಈ ಸರ್ಕಾರ ಮಾಡಿರುವ ಎಡವಟ್ಟುಗಳನ್ನು ಬಿಜೆಪಿ ನಾಯಕರು ಪಟ್ಟಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.
ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಿಜೆಪಿ ಟಕ್ಕರ್ ಪಟ್ಟಿ :
- ರಾಜ್ಯ ಸರ್ಕಾರದಿಂದ ಗ್ಯಾರೆಂಟಿಗಳ ಅನುಷ್ಠಾನಕ್ಕೆ ಜನರಿಗೆ ಬೆಲೆ ಏರಿಕೆಯ ಬರೆ.
- ಎಲ್ಲಾ ದಿನನಿತ್ಯ ವಸ್ತುಗಳ ಬೆಲೆ ಏರಿಕೆ.
- ಗ್ಯಾರೆಂಟಿಗಳ ಅನುಷ್ಠಾನಕ್ಕಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಸ್ಥಗಿತ.
- ಈಗಾಗಲೇ ಜನಾಕ್ರೋಶ ಯಾತ್ರೆ ಮೂಲಕ ಜಾಗೃತಿ ಮೂಡಿಸಿರುವ ಬಿಜೆಪಿ ನಾಯಕರು.
- ಇನ್ನು ಸಿಎಂ ಸಿದ್ಧರಾಮಯ್ಯರ ವಿರುದ್ಧ ಮುಡಾ ಹಗರಣ, ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ವಾಲ್ಮೀಕಿ ಹಗರಣ.
- ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಮಂದಿ ಬಲಿ ವಿಚಾರ.
- ಸ್ಮಾರ್ಟ್ ಮೀಟರ್ ಆಳವಡಿಕೆಯ ಗೋಲ್ಮಾಲ್.
- ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು.
- ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲೇ ಜಟಾಪಟಿ.
- ಇದೆಲ್ಲದರ ಜೊತೆಗೆ ಶಾಸಕರಿಗೆ ಅನುದಾನ ತಾರತಮ್ಯ.
ಹೀಗೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಜಾರ್ಚ್ಶೀಟ್ ಅನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದ್ದರು.



















