ತುಮಕೂರು : ಅಂಗಡಿ ಹಾಗೂ ಬೇಕರಿಗೆ ಲಾರಿ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕೋಳಾಲ ಸರ್ಕಾಲ್ ಬಳಿ ಈ ಘಟನೆ ನಡೆದಿದೆ. ಬ್ಯಾಂಗಲ್ ಸ್ವೋರ್, ಬೇಕರಿಗೆ ಲಾರಿ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾಟೇನಹಳ್ಳಿ ಗ್ರಾಮದ ರಂಗಶಾಮಯ್ಯ(65), ಪುರದಲ್ಲಿ ಗ್ರಾಮದ ಬೈಲಪ್ಪ(63) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಜಯಣ್ಣ, ಕಾಂತರಾಜು, ಸಿದ್ದಗಂಗಮ್ಮ, ಮೋಹನ್ ಕುಮಾರ್ ಗಾಯಗೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋಳಾಲ ಹೋಬಳಿ ಕೇಂದ್ರವಾಗಿದ್ದು, ಜನದಟ್ಟನೆ ಹೆಚ್ಚಾಗಿದ್ದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















