ಬೀದರ್ : ನಿರ್ಮಿತಿ ಕೇಂದ್ರದಿಂದ ಅವೈಜ್ಞಾನಿಕ ಸೇತುವೆ ನಿರ್ಮಾಣದಿಂದ ರೈತರ ಜಮೀನುಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಬೆಳೆ ಹಾನಿಗಿರುವ ಘಟನೆ ಬಸವ ಕಲ್ಯಾಣ ತಾಲೂಕಿನ ಕೊಹೀನೂರ್ ಗ್ರಾಮದಲ್ಲಿ ನಡೆದಿದೆ.
ಕೊಹೀನೂರ್ನಿಂದ ಸಲಗರ್ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕೆಲ ದಿನಗಳ ಹಿಂದೆ ಕೆಕೆಆರ್ಡಿಬಿ ಅನುದಾನದಿಂದ ಸೇತುವೆ ನಿರ್ಮಿಸಲಾಗಿದೆ. ನಾಲೆಯ ಮೂಲಕ ಹರಿದು ಹೋಗಬೇಕಿದ್ದ ಮಳೆ ನೀರು ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗಿದೆ. ಸೇತುವೆ ನಿರ್ಮಾಣಕ್ಕೂ ಮೊದಲು ಈ ಸಮಸ್ಯೆ ಆಗುತ್ತಿರಲಿಲ್ಲ. ಅವೈಜ್ಞಾನಿಕವಾಗಿ ಸೇತುವೆ ನಿರ್ಮಾಣ ಮಾಡಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ನಿರ್ಮಿತಿ ಕೇಂದ್ರದ ವಿರುದ್ಧ ರೈತರು ಆರೋಪಿಸಿದ್ದಾರೆ.
ಸೇತುವೆ ನಿರ್ಮಾಣದಿಂದ ಜಮೀನುಗಳಿಗೆ ನೀರು ನುಗ್ಗುವ ಬಗ್ಗೆ ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದರು ಸಹ ಅಧಿಕಾರಿಗಳು ಅದನ್ನು ತಳ್ಳಿ ಹಾಕಿ ಸೇತುವೆ ನಿರ್ಮಾಣ ಮಾಡಿದ್ದಾರೆ. ಹಾಗಾಗಿ, ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.



















