ಸಂವಿಧಾನದ 73ನೇ ತಿದ್ದುಪಡಿಗೆ ಪೂರಕವಾಗಿ ಗ್ರಾಪಂಗಳಲ್ಲಿ ನೀಡುತ್ತಿರುವ ಏಕ ವಿನ್ಯಾಸ ನಕ್ಷೆ(9/11) ಹಕ್ಕನ್ನು ಕಸಿದು ಕಾಂಗ್ರೆಸ್ ನೇತೃತ್ವದ ಸರ್ಕಾರ ನಗರ ಪ್ರಾಧಿಕಾರಕ್ಕೆ ನೀಡಿದ್ದನ್ನು ಖಂಡಿಸಿ ಮತ್ತು ಈ ಅಧಿಕಾರವನ್ನು ಗ್ರಾಪಂಗಳಿಗೆ ಮರಳಿ ನೀಡಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಜು.28ಕ್ಕೆ ರಜತಾದ್ರಿ ಮಣಿಪಾಲದ ಜಿಲ್ಲಾಧಿಕಾರಿಗಳ ಮುಂಭಾಗದಲ್ಲಿ ಪ್ರತಿಭಟನೆಗೆ ಕರೆ ನೀಡಿದೆ.
ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಸಾರ್ವಜನಿಕರು ಭಾಗವಹಿಸುವಂತೆ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿಜಯ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















