ಆನೇಕಲ್: ಎರಡು ಲಾರಿ ಹಾಗೂ ಬೊಲೆರೋ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯ ಬೊಮ್ಮಸಂದ್ರದ ಹೆನ್ನಾಗರ ಗೇಟ್ ಬಳಿ ನಡೆದಿದೆ.
ಹಂಪ್ಸ್ ಕಾಣದೆ ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಇದೇ ವೇಳೆ ಬೊಲೆರೋ ವಾಹನಕ್ಕೆ ಹಿಂದೆಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದ್ದು, ಎರಡು ಲಾರಿಗಳ ಮಧ್ಯೆ ಬೊಲೆರೋ ವಾಹನ ಸಿಲುಕಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರ ಸ್ಥಿತಿ ಗಂಭಿರವಾಗಿದೆ.
ಘಟನೆಯಲ್ಲಿ ಬೊಲೆರೋ ವಾಹನದಲ್ಲಿದ್ದ ಮುಷ್ತಾಕ್(37), ಸಾಧಿಕ್(45) ಹಾಗೂ ಮುದಾಸಿರ್ (30) ಗಂಭೀರ ಗಾಯಗೊಂಡಿದ್ದಾರೆ ಹಾಗೂ ಲಾರಿಯಲ್ಲಿದ್ದ ಮೂರ್ನಾಲ್ಕು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ತಂಡ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಬೊಲೆರೋ ವಾಹನದಲ್ಲಿದ್ದ ಗಾಯಾಳುಗಳನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಸೂರ್ಯ ಸಿಟಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.



















