ಉತ್ತರಕಾಶಿಯಲ್ಲಿ ಉಂಟಾದ ಮೇಘಸ್ಫೋಟ ಹಾಗೂ ಅದರಿಂದ ಉಂಟಾದ ತೊಂದರೆ, ಸಾವು -ನೋವಿಗೆ ಪ್ರಧಾನಿ ನರೇಂದ್ರ ಮೋದಿ ಸಂಕಟ ಪಟ್ಟಿದ್ದಾರೆ.
ಉತ್ತರಕಾಶಿಯ (Uttarkashi cloudburst) ಧರಾಲಿ ಗ್ರಾಮದಲ್ಲಿ ಭಾರಿ ಮೇಘಸ್ಫೋಟ ಉಂಟಾಗಿದ್ದರಿಂದ ಆ ಗ್ರಾಮ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಜನರು ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವ ದೃಶ್ಯಗಳು ಎಲ್ಲರ ಮನಕಲಕುತ್ತಿವೆ. ಇದರ ಬೆನ್ನಲ್ಲೇ ಸುಖಿ ಟಾಪ್ ನಲ್ಲಿ (Sukhi Top Flood) ಕೂಡ ಭಾರೀ ಪ್ರವಾಹ ಉಂಟಾಗಿದೆ. ಈ ದಿಢೀರ್ ಪ್ರವಾಹದಿಂದ ನಾಲ್ವರು ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.



















