ಮಂಗಳೂರು : ಧರ್ಮಸ್ಥಳ ಹೆಸರು ಹಾಳು ಮಾಡಲಾಗುತ್ತಿದೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜೊತೆ ನಾವಿದ್ದೇವೆ. ಇಡೀ ಜಗತ್ತಿದೆ. ಇಡಿ ಕುದ್ರೋಳಿ ದೇವಸ್ಥಾನ ನಿಮ್ಮೊಂದಿಗಿದೆ ಹೆದರಬೇಡಿ ಎಂದು ಮಾಜಿ ಸಂಸದ ಜನಾರ್ದನ ಪೂಜಾರಿ ಹೇಳಿದ್ದಾರೆ.ಸಮಾರಂಭವೊಂದರಲ್ಲಿ ಮಾತನಾಡಿದ ಪೂಜಾರಿ, ಮಸೀದಿ, ಚರ್ಚ್ಗಳಲ್ಲಿ ಶವ ಹೂತಿಡಲಿಲ್ಲವೇ ? ಕೇವಲ ಧರ್ಮಸ್ಥಳದಲ್ಲಿ ಮಾತ್ರವೇ ? ಎಸ್ಐಟಿ ಧರ್ಮಸ್ಥಳದಲ್ಲಿ ಎಷ್ಟು ಅಗೆದರೂ ಏನು ಸಿಗುವುದಿಲ್ಲ. ಮನುಷ್ಯ ಸತ್ತ ಮೇಲೆ ಆ ಮೃತದೇಹವನ್ನು ದೇವಸ್ಥಾನದ ವಠಾರದಲ್ಲಿ ಹೂತು ಹಾಕುವುದು ಒಂದು ಪದ್ಧತಿ. ಧರ್ಮಸ್ಥಳದಂತಹ ದೇವಸ್ಥಾನವನ್ನು ನಡೆಸೋದು ಎಷ್ಟು ಕಷ್ಟ ಇದೆ ಎಂದು ನನಗೆ ಗೊತ್ತು. ವೀರೇಂದ್ರ ಹೆಗ್ಗಡೆಯವರೇ ನಿಮ್ಮ ಜೊತೆ ನಾನಿದ್ದೇನೆ ಎಂದಿದ್ದಾರೆ.
ಧರ್ಮಸ್ಥಳದ ವಠಾರವನ್ನು ಎಸ್ಐಟಿಯವರು ಅಗೆಯುತ್ತಿದ್ದಾರೆ. ಶವಗಳನ್ನ ಹೂತ್ತಿದ್ದಾರೆ ಎನ್ನುವ ಆರೋಪದಲ್ಲಿ ಶವಗಳನ್ನು ಹುಡುಕುತ್ತಿದ್ದಾರೆ. ಧರ್ಮಸ್ಥಳ ಕೇವಲ ಜೈನರಿಗೆ ಸೇರಿದ ಸ್ಥಳವಲ್ಲ. ಧರ್ಮಸ್ಥಳವನ್ನು ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಕುದ್ರೋಳಿ ದೇವಸ್ಥಾನಕ್ಕೆ ಮಾತ್ರ ನಾನು ಭಕ್ತನಲ್ಲ, ನಾನು ಧರ್ಮಸ್ಥಳದ ಭಕ್ತ. ಎಸ್ಐಟಿಯವರು ಹುಡುಕಿದ್ರೂ ಏನು ಸಿಗುತ್ತಿಲ್ಲ. ಮುಖ್ಯಮಂತ್ರಿಯವರೇ ನೀವೇನು ಮಾಡುತ್ತಿದ್ದೀರಿ ? ಧರ್ಮಸ್ಥಳದ ಹೆಸರು ಹಾಳಾಗುತ್ತಿದೆ. ಧರ್ಮಸ್ಥಳದ ಹೆಸರು ಹಾಳಾಗುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಧರ್ಮಸ್ಥಳದ ಹೆಸರು ಹಾಳು ಮಾಡುವುದಕ್ಕೆ ಪೂಜಾರಿ ಬಿಡುವುದಿಲ್ಲ. ಪ್ರಧಾನಿ ಮೋದಿಯವರು ಇಂದು ಕರ್ನಾಟಕಕ್ಕೆ ಬಂದಿದ್ದಾರೆ. ಮೋದಿಯವರೇ ನಿಮಗೆ ಧೈರ್ಯವಿದ್ದರೆ, ತಾಕತ್ತಿದ್ದರೆ ಧರ್ಮಸ್ಥಳಕ್ಕೆ ಹೋಗಿ ಭಾಷಣ ಮಾಡಿ ಎಂದು ಸವಾಲೆಸೆದಿದ್ದಾರೆ.