ಬೆಂಗಳೂರು: ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ. ಅದು ಸಾಮಾನ್ಯ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ರಾಜಕೀಯದ ಪಾಠ ಮಾಡಿದ್ದಾರೆ.
ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ, ರಾಜಣ್ಣರನ್ನು ವಜಾ ಮಾಡಿರುವುದು ಹೈಕಮಾಂಡ್ನ ನಿರ್ಧಾರ. ಅದರ ಬಗ್ಗೆ ರಾಜಣ್ಣ ಅವರೇ ಹೇಳಿದ್ದಾರೆ. ದೆಹಲಿಗೆ ಹೋಗುವುದಾಗಿ ಅವರೇ ಹೇಳಿದ್ದಾರೆ. ಪಿತೂರಿ ಎಂದೂ ಹೇಳಿದ್ದಾರೆ. ಹೈಕಮಾಂಡ್ ಹತ್ತಿರ ಹೋಗಿ ಅವರು ಮಾತಾಡುತ್ತಾರೆ. ವಜಾ ಆಗಿರುವ ಬಗ್ಗೆ ವ್ಯಾಖ್ಯಾನ ಮಾಡುವುದಕ್ಕೆ ಹೋಗಲ್ಲ ಎಂದಿದ್ದಾರೆ.
ಇದನ್ನು ಸಮುದಾಯಕ್ಕೆ ಮಾಡಿದ ಮೋಸ ಎಂದು ಹೇಳಲಗುವುದಿಲ್ಲ. ಮುಂದೆ ಕಾದು ನೋಡಬೇಕಿದೆ. ಇದು ನಮ್ಮ ಪಕ್ಷದ ನಿರ್ಧಾರ. ವಿಪಕ್ಷಗಳು ಯಾಕೆ ಮಾತನಾಡುತ್ತಾರೆ. ಸಿಎಂ ಅವರು ಸ್ಪಷ್ಟನೆ ನೀಡುತ್ತಾರೆ. ದೆಹಲಿಗೆ ಹೋದ ಮೇಲೆ ಎಲ್ಲವೂ ತಿಳಿಯಾಗಬಹುದು ಎಂದು ಹೇಳಿದ್ದಾರೆ.