ಮಂಗಳೂರು: ಬಸ್ ಬ್ರೇಕ್ ಫೇಲ್ ಆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೇರಳ ಗಡಿ ಭಾಗದ ತಲಪಾಡಿ ಬಳಿ ಈ ಘಟನೆ ನಡೆದಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದಾರೆ. ಬಸ್ ನ ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಬಸ್ ತುಂಗುದಾಣಕ್ಕೆ ನುಗ್ಗಿದೆ. ಆ ವೇಳೆ ಅಲ್ಲಿ ಬಸ್ ಗಾಗಿ ಕಾಯುತ್ತಿದ್ದವರ ಮೇಲೆಯೇ ಬಸ್ ಹರಿದಿದೆ. ಪರಿಣಾಮ ಆಟೋ ಚಾಲಕ, ಒಂದು ಮಗು, ಬಾಲಕಿ, ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನು ಆಟೋ ಚಾಲಕ ಹೈದರ್ (47), ಅವಮ್ಮಾ (72), ಖದೀಜಾ (60), ಹಸ್ನಾ(11), ನಫೀಸಾ (52), ಆಯಿಷಾ ಫಿದಾ (19) ಎಂದು ಗುರುತಿಸಲಾಗಿದೆ. ಲಕ್ಷ್ಮಿ (61), ಸುರೇಂದ್ರ (39) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.



















