ಮೈಸೂರು: ನಾಡಹಬ್ಬ ದಸರಾ 2025ಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಅರಮನೆಯಲ್ಲಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯವನ್ನು ಮಾಡಲಾಗುತ್ತಿದೆ. ಹೀಗಾಗಿ ಮಧ್ಯಾಹ್ನದವರೆಗೆ ಅರಮನೆಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರಾಜವಂಶಸ್ಥರು ಧಾರ್ಮಿಕ ಖಾಸಗಿ ದರ್ಬಾರ್ ನಡೆಸುತ್ತಾರೆ, ಈ ಹಿನ್ನೆಲೆ ಸಿಂಹಾಸನ ಜೋಡಣೆ ಮಾಡಲಾಗುತ್ತದೆ.
ದರ್ಬಾಲ್ ಹಾಲ್ ನಲ್ಲಿ ಗಣಪತಿ, ಚಾಮುಂಡಿ ಪೂಜೆ, ಹೋಮ ಹವನ ಪೂಜೆಗಳನ್ನು ನಡೆಸಲಾಗುತ್ತದೆ. ಬಳಿಕ ಸ್ಟ್ರಾಂಗ್ ರೂಂ ನಿಂದ ಬಿಗಿ ಭದ್ರತೆಯೊಂದಿಗೆ ಪ್ರಮೋದ ದೇವಿ ಒಡೆಯರ್ ಸಮ್ಮುಖದಲ್ಲಿ ಚಿನ್ನದ ಸಿಂಹಾಸನದ ಬಿಡಿ ಭಾಗಗಳನ್ನು ಭದ್ರಾಸನದ ಬಿಡಿ ಭಾಗಗಳನ್ನ ದರ್ಬಾರ್ ಹಾಲ್ ಗೆ ತಂದು ಕನ್ನಡಿ ತೊಟ್ಟಿಯಲ್ಲಿ ಬೆಳ್ಳಿ ಭದ್ರಾಸನ ಜೋಡಣೆ ಕಾರ್ಯ ಮಾಡಲಾಗುತ್ತದೆ.


















