ಬೆಂಗಳೂರು: ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್ ಚೋರಿ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ್ ಖಂಡ್ರೆ,. ಅಳಂತದಲ್ಲಿ ಮತದಾರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅವರು ಖಚಿತ ಪಡಿಸಿಕೊಂಡು ಈ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ರಾಹುಲ್ ಗಾಂಧಿಯವರ ಜೊತೆ ಇಡೀ ದೇಶ ಇದೆ. ನಮ್ಮ ಮತ ನಮ್ಮ ಹಕ್ಕು ಹೋರಾಟ ಮಾಡುತ್ತೀವಿ. ಹಿಂಬಾಗಿಲಿನಿಂದ ಬಂದಿರುವ ಈ ಸರ್ಕಾರವನ್ನು ಕಿತ್ತು ಹಾಕುವವರೆಗೂ ನಾವು ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದಾರೆ.