ಬೆಂಗಳೂರು: ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸಿ ನಮ್ಮ ಸರ್ಕಾರ ಜಾತ್ಯತೀತ ಸರ್ಕಾರ ಎಂದು ತೋರಿಸಿದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.
ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸುವುದಕ್ಕೆ ಬಿಜೆಪಿ ವಿರೋಧ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರದೀಪ್ ಈಶ್ವರ್, ಈ ವೇಳೆ ದಸರಾ ನಮ್ಮ ನಾಡಹಬ್ಬ. ಬಾನು ಮುಷ್ತಾಕ್ ನಮ್ಮ ಕನ್ನಡದ ಹೆಣ್ಣು ಮಗಳು. ʻಎದೆಯ ಹಣತೆʼಎಂಬ ಅವರ ಪುಸ್ತಕಕ್ಕೆ ಬೂಕರ್ ಪ್ರಶಸ್ತಿ ಬಂದಿದೆ. ಅವರಿಗೆ ಕನ್ನಡದ ಮೇಲೆ ಪ್ರೀತಿ ಇಲ್ಲದೆ ಹೋಗಿದ್ದರೆ ಎದೆಯ ಹಣತೆ ಪುಸ್ತಕವನ್ನು ಕನ್ನಡದಲ್ಲಿ ಬರೆಯದೇ ಉರ್ದುವಿನಲ್ಲಿ ಬರೆಯುತ್ತಿದ್ದರು. ನಮ್ಮ ಸರ್ಕಾರ ಅವರಿಗೆ ಗೌರವ ನೀಡಿದೆ. ಇದು ನಿಜವಾಗಿಯೂ ಜಾತ್ಯತೀತಕ್ಕೆ ಕೊಡುತ್ತಿರುವ ಗೌರವ ಎಂದಿದ್ದಾರೆ.
ಹಿಂದೆ ರಾಜರು ಮಿರ್ಜಾ ಇಸ್ಮಾಯಿಲ್ ಅವರನ್ನು ಕೂರಿಸಿಕೊಂಡು ಮೈಸೂರು ದಸರಾ ಮಾಡಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಬಾರದು ಎಂದು ಹೈಕೋರ್ಟ್, ಸುಪ್ರೀಂಕೋರ್ಟ್ಗೆ ಹೋಗಿದ್ದರು, ಬಿಜೆಪಿಯವರಿಗೆ ಮುಖಭಂಗ ಆಯಿತು. ಸಂವಿಧಾನದ ಪ್ರಕಾರವೇ ನಾವು ಮಾಡಿದ್ದೇವೆ ಎಂದು ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ.