ಹೈದರಾಬಾದ್: ಕಾಲೇಜು ವಾಲಿಬಾಲ್ ತರಬೇತುದಾರನ ಕಿರುಕುಳದಿಂದ ಬೇಸತ್ತಾ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಹೈದರಾಬಾದ್ನ ತರ್ನಾಕ ಪ್ರದೇಶದ ರೈಲ್ವೆ ಪದವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದಳು. ವಾಲಿಬಾಲ್ ತರಬೇತುದಾರ ಅಂಬಾಜಿ ನಾಯಕ್ ಆಕೆಗೆ ಕಿರುಕುಳ ನೀಡುತ್ತಿರುವುದಾಗಿ ಆಕೆಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯಾವುದೇ ಡೆತ್ನೋಟ್ ಪತ್ರ ಅಥವಾ ವೀಡಿಯೊ ಪತ್ತೆಯಾಗಿಲ್ಲ. ಸಂತ್ರಸ್ತೆ ತನ್ನ ಕುಟುಂಬಕ್ಕೆ ಯಾವುದೇ ಕಿರುಕುಳದ ಬಗ್ಗೆ ತಿಳಿಸಿರಲಿಲ್ಲ. ಆದರೆ, ಆಕೆಯ ಸ್ನೇಹಿತರು ಅದನ್ನು ಉಲ್ಲೇಖಿಸಿದ್ದಾರೆ. ಈ ವಿಷಯದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಲಾಲಾಗುಡದ ಸ್ಟೇಷನ್ ಹೌಸ್ ಅಧಿಕಾರಿ ತಿಳಿಸಿದ್ದಾರೆ.