ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯ ಮೇಲೆ ನಿರ್ಮಾಣವಾಗಿರುವ 22 ಅಡಿ ಉದ್ದದ ಕೇಸರಿ ಧ್ವಜವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನ. 25 ರಂದು ಧ್ವಜಾರೋಹಣ ಮಾಡಿ ಚಾಲನೆ ನೀಡಲಿದ್ದಾರೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಧಾರ್ಮಿಕ ಸಮಿತಿಯ ಸದಸ್ಯರ ಮಹತ್ವದ ಸಭೆ ಜಾನಕಿ ಘಾಟ್ನ ವೈದೇಹಿ ಭವನದಲ್ಲಿ ನಡೆದಿದೆ. ಇಗಾಗಲೇ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. 191 ಅಡಿ ಎತ್ತರದ ರಾಮಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲು ನಿರ್ಧರಿಸಿದ್ದು, ಧ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸವಂತೆ ತಿಳೀಸಿದೆ ಎಂದು ಧಾರ್ಮಿಕ ಸಮಿತಿಯ ಸದಸ್ಯ ಗೋಪಾಲ್ ರಾವ್ ಹೇಳಿದ್ದಾರೆ.
ದೀಪಾವಳಿ ಬಳಿಕ ಎಲ್ಲಾ ಅತಿಥಿಗಳಿಗೆ ಆಹ್ವಾನ ಪತ್ರಗಳನ್ನು ಕಳುಹಿಸಲಾಗುವುದು. ಎಂಟರಿಂದ ಹತ್ತು ಸಾವಿರ ಅತಿಥಿಗಳು ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.