ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ಕೀರ್ತಿ ಸುರೇಶ್ ನಟಿಸಿರುವ ಹೊಸ ಸಿನಿಮಾದ ಮೂಹೂರ್ತ ನಿನ್ನೆ ಹೈದರಾಬಾದ್ನಲ್ಲಿ ನೆರವೇರಿದೆ. ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿ, ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿ, ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59ನೇ ಚಿತ್ರ ಇದಾಗಿದೆ. ಈ ಚಿತ್ರಕ್ಕೆ ನಿರ್ದೇಶಕ ರವಿಕಿರಣ್ ಕೋಲಾ ಆಕ್ಷನ್ ಕಟ್ ಹೇಳಿದ್ದಾರೆ.
ಗ್ರಾಮೀಣ ಆಕ್ಷನ್ ಡ್ರಾಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದೇ ತಿಂಗಳ 16 ರಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.