ಉಡುಪಿ : ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರು ಸೋಮವಾರ ತಡರಾತ್ರಿ ಬಾರ್ಕೂರು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು.
ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



















