ಉಡುಪಿ: ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ.
ಮಲ್ಲೇಶ್(23) ಮತ್ತು ಪವಿತ್ರಾ(17) ಮೃತರಾಗಿದ್ದು, ಇವರು ಅಕ್ಕ- ತಂಗಿಯರ ಮಕ್ಕಳಾಗಿದ್ದಾರೆ. ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆದರೆ ಸಾವಿನ ರಹಸ್ಯ ನಿಗೂಢವಾಗಿದೆ.
ಬೇರೊಂದು ಮನೆಯಲ್ಲಿ ಕೆಲಸ ಮಾಡಿ , ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದುತ್ತಿದ್ದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ತನ್ನ ತಾಯಿ ಮತ್ತು ಪವಿತ್ರಾ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ. ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.