ಬೀದರ್ : ಬೀದರ್ನ ಕುಂಬಾರವಾಡ ಬಡಾವಣೆಯಲ್ಲಿ ವೇಗವಾಗಿ ಬಂದ ಕಾರೊಂದು ಗುದ್ದಿದ ಪರಿಣಾಮ ವಾಕಿಂಗ್ ಮಾಡುತ್ತಿದ್ದ ವೃದ್ದರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು 76 ವರ್ಷ ವಯಸ್ಸಿನ ಭೀಮಣ್ಣ ಎಂದು ಗುರುತಿಸಲಾಗಿದೆ.

ಕಾರು ಗುದ್ದಿರುವ ರಭಸಕ್ಕೆ ಭೀಮಣ್ಣ ದೇಹ 50 ಅಡಿಯಷ್ಟು ದೂರಕ್ಕೆ ಎಸೆಯಲ್ಪಟ್ಟಿದ್ದು, ಕಾರು ಚಾಲಕ ಕಾರನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ.
ಇಂದು ಬೆಳಗ್ಗೆ 5:30 ಸುಮಾರಿಗೆ ಸಂಭವಿಸಿದ ಘಟನೆಯ ಭಿಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



















