ಬೆಂಗಳೂರು: ಮಲತಂದೆಯೊಬ್ಬ 7ವರ್ಷದ ಮಗಳನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕುಂಬಳಗೊಡುಯ ಕನ್ನಿಕಾ ಬಡಾವಣೆಯಲ್ಲಿ ನಡೆದಿದೆ.
ಮಲತಂದೆ ದರ್ಶನ್, 7 ವರ್ಷದ ಸಿರಿ ಎನ್ನುವ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಕೊಲೆಯಾದ ಬಾಲಕಿ ತಾಯಿ ಮೊದಲ ಗಂಡ ಮೃತಪಟ್ಟ ಹಿನ್ನೆಲೆಯಲ್ಲಿ ಬಾಳಿಗೆ ಆಸರೆಯಾಗುತ್ತಾನೆಂದು ದರ್ಶನ್ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಆದರೆ, ಯಾವುದೋ ಕಾರಣಕ್ಕೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಇದೇ ಸಿಟ್ಟಿನಲ್ಲಿ ದರ್ಶನ್ ಬಾಲಕಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕುಂಬಳಗೊಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















