ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 21ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಅನ್ಯಾಯ ವಿಚಾರವಾಗಿ ಇಂದು ಸಭೆ ನಡೆದಿದ್ದು, ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂಗೆ ಈ ಪ್ರಶ್ನೆ ಎದುರಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಯಾರ್ ಹೇಳಿದ್ದು? ನಿನಗೆ ಯಾರ್ ಹೇಳಿದ್ರು? ನಿನಗೆ ಹೆಂಗೆ ಗೊತ್ತಾಯ್ತು? ಯಾವ ಪತ್ರಿಕೆ ನೋಡಿದೆ ನೀನು? ನಾನು ಎಲ್ಲಾ ಪತ್ರಿಕೆ ಓದುತ್ತೇನೆ. ಯಾವುದರಲ್ಲೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಇನ್ನು, ಅಲೆಮಾರಿ ಸಮುದಾಯದ ಸಭೆ ಕುರಿತು ಮಾತನಾಡಿ, ಅಲೆಮಾರಿಗಳ ಮಹಾ ಒಕ್ಕೂಟದ ಸಭೆ ಮಾಡಿದ್ದೇವೆ. ನಾಗಮೋಹನ್ ದಾಸ್ ಅವರು ನಮಗೆ 1% ಕೊಟ್ಟಿದ್ದರು. ಆದರೆ, ನಮಗೆ ಸಿ ಗ್ರೂಪ್ಗೆ ಸೇರಿಸಿದ್ದೀರಾ. ನಮಗೆ ಪ್ರತ್ಯೇಕ 1% ಕೊಡಬೇಕು ಅಂತ ಒತ್ತಾಯ ಮಾಡಿದ್ದಾರೆ. ಅಭಿವೃದ್ಧಿ ನಿಗಮ ಮಾಡಲು ಕೇಳಿದ್ದಾರೆ. ಆರ್ಥಿಕ ಪ್ಯಾಕೇಜ್ ಕೊಡಬೇಕು ಅಂತ ಮನವಿ ಮಾಡಿದ್ರು. ನಾವು ಸಾಮಾಜಿಕ ನ್ಯಾಯದ ಪರ ಇರೋದು. 1% ಕೊಡೋ ಬಗ್ಗೆ ಕಾನೂನು ತಜ್ಞರ ಜೊತೆ ಸಭೆ ಮಾಡಿ ತೀರ್ಮಾನ ಮಾಡ್ತೀವಿ. ಅಭಿವೃದ್ಧಿ ನಿಗಮ ಮಾಡ್ತೀವಿ. ಆರ್ಥಿಕ ಪ್ಯಾಕೇಜ್ ಕೊಡೋದಾಗಿ ಹೇಳಿದ್ದೇವೆ. ಸ್ವಲ್ಪ ಸಮಯ ಕೊಡಿ ಅಂತ ಕೇಳಿದ್ದೇವೆ. ಕೋರ್ಟ್ ಕೇಸ್ ವಾಪಸ್ ಪಡೆಯಬೇಕು ಅಂತ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯದ ಜನರ ಪಾಲಿಗೆ ಸರ್ಕಾರ ಬದುಕಿಲ್ಲ |ಶೋಭಾ ಕರಂದ್ಲಾಜೆ ಆಕ್ರೋಶ



















