ಬಾಗಲಕೋಟೆ: ಕಬ್ಬಿನ ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರು ನಡೆಸುತ್ತಿದ್ದ ಹೋರಾಟ ಇದೀಗಾ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ.
ದರ ನಿಗದಿ ಹಾಗೂ ಬಾಕಿ ಬಿಲ್ ಪಾವತಿಸುವಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಮುಧೋಳ ಭಾಗದ ರೈತರು ಪ್ರಭುಲಿಂಗೇಶ್ವರ ಕಾರ್ಖಾನೆ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಿಂತಿದ್ದ ವಾಹನಗಳು ಹಾಗೂ ಕಾರ್ಖಾನೆಯ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ.
ಕಾರ್ಖಾನೆಯ ಮಾಲಿಕತ್ವಕ್ಕೆ ಸೇರಿದ ಬೊಲೆರೋ ವಾಹನ ಸೇರಿ ಇತರೇ ವಾಹನಗಳ ಗಾಜು ಪುಡಿ ಪುಡಿಯಾಗಿವೆ. ರೈತರು ನಡೆಸುತ್ತಿದ್ದ ಪ್ರತಿಭಟನೆ ಯಾರೋ ಕಿಡಿಗೇಡಿಗಳಿಂದ ಈ ಕಲ್ಲು ತೂರಾಟ ಕೃತ್ಯ ನಡೆಸಿದ್ದಾರೆ. ಇದು ರೈತರಿಂದ ಆಗಿರುವ ಘಟನೆ ಅಲ್ಲ ಎಂದು ಕಬ್ಬು ಬೆಳೆಗಾರರು ಹೇಳುತ್ತಿದ್ದಾರೆ.
ಕಲ್ಲು ತೂರಾಟ ನಡೆಸಿದವರು ಯಾರು ಎಂದು ಪರಿಶೀಲಿಸಿಲು ಸ್ಥಳಕ್ಕೆ ಜಮಖಂಡಿ ಪೊಲೀಸರು ಆಗಮಿಸಿ, ಸ್ಥಳ ಪರಿಶೀಲನೆ ಮಾಡಿ, ಕಾರ್ಖಾನೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ. ಸಧ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ರೈತರು ಹಾಗೂ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆ ಮುಂದುವರೆದಿದೆ ಎಂದಿಉ ತಿಳಿದು ಬಂದಿದೆ.
ಇದನ್ನೂ ಓದಿ: ಉಡುಪಿ : ಸ್ಕೂಟರ್ ಡಿಕ್ಕಿಯಾಗಿ ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿ ಮೃತ್ಯು



















