ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12ರಲ್ಲಿ ಕಾವ್ಯಗೋಸ್ಕರ ಗಿಲ್ಲಿ ನಟ ದೊಡ್ಮನೆಯಲ್ಲಿ ಹೀರೋ ಆಗಿದ್ದಾರೆ. ಗಿಲ್ಲಿ ತಮ್ಮ ಮನೆಯಿಂದ ಬಂದ ಪತ್ರವನ್ನು ಕಳೆದುಕೊಂಡು, ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ನಲ್ಲಿ ಮುಂದುವರಿದಿದ್ದಾರೆ.
ಈ ವಾರ ಸ್ಪರ್ಧಿಗಳಿಗೆ ಅವರವರ ಮನೆಗಳಿಂದ ಪತ್ರಗಳು ಬಂದಿದ್ದವು. ಸ್ಪರ್ಧಿಗಳು ತಮ್ಮ ಮನೆಯ ಪತ್ರಗಳನ್ನು ಓದಬೇಕಾದರೆ ಬಿಗ್ ಬಾಸ್ ನೀಡುವ ಟಾಸ್ಕ್ ಪೂರ್ಣಗೊಳಿಸಬೇಕಿತ್ತು. ಇಬ್ಬಿಬ್ಬರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ಈ ಟಾಸ್ಕ್ ನೀಡಲಾಯಿತು. ಗೆದ್ದವರು ತಮ್ಮ ಮನೆಯಿಂದ ಬಂದ ಪತ್ರವನ್ನು ಓದಬಹುದು. ಆದರೆ, ಸೋತವರು ಪತ್ರವನ್ನು ಕಳೆದುಕೊಳ್ಳುವರು ಅಂತ ಸೂಚಿಸಲಾಗಿತ್ತು.

ಹೀಗೆ ಸ್ಪರ್ಧೆಯಲ್ಲಿ ಕಾವ್ಯ ಮತ್ತು ಗಿಲ್ಲಿಯನ್ನು ಪ್ರತ್ಯೇಕವಾಗಿ ಕರೆಯಲಾಗಿತ್ತು. ಕಾವ್ಯ ಎದುರು ಗಿಲ್ಲಿ ಮನೆಯ ಲೆಟರ್ ಹಾಗೂ ಗಿಲ್ಲಿ ಎದುರು ಕಾವ್ಯ ಮನೆಯ ಲೆಟರ್ ಇಡಲಾಗಿತ್ತು. ನಿಯಮದ ಪ್ರಕಾರ ಯಾರಾದರು ಒಬ್ಬರು ಮಾತ್ರ ಲೆಟರ್ ಅನ್ನು ಹೊರಗೆ ತರಬಹುದಿತ್ತು. ಅಪ್ಪಿತಪ್ಪಿ ಇಬ್ಬರೂ ಲೆಟರ್ ತಂದರೆ, ಇಬ್ಬರೂ ಕೂಡ ಲೆಟರ್ ಕಳೆದುಕೊಂಡು ನಾಮಿನೇಷನ್ನಲ್ಲಿ ಮುಂದುವರಿಯಬೇಕಿತ್ತು. ಈ ಸಂಬಂಧ ಆಲೋಚನೆಗೆ ಎರಡು ನಿಮಿಷ ಕಾಲಾವಕಾಶ ನೀಡಲಾಗಿತ್ತು.
2 ನಿಮಿಷದ ಬಳಿಕ, ‘ಗಿಲ್ಲಿ ನಿಮ್ಮ ನಿರ್ಧಾರ ತಿಳಿಸಿ’ ಅಂತ ಬಿಗ್ ಬಾಸ್ ಕೇಳಿದರು. ಆಗ ಗಿಲ್ಲಿ ಲೆಟರ್ ತೆಗೆದುಕೊಂಡು ಹೊರಗೆ ಬರುವುದಾಗಿ ಸ್ಪಷ್ಟಪಡಿಸಿದರು. ಇತ್ತ ಕಾವ್ಯಗೂ ಇದೇ ಪ್ರಶ್ನೆ ಮುಂದಿಡಲಾಯಿತು. ಆದರೆ, ಕಾವ್ಯ ಲೆಟರ್ ಹೊರ ತರುವುದಿಲ್ಲ ಎಂದು ತಿಳಿಸಿದರು. ಅಲ್ಲದೇ, ಗಿಲ್ಲಿ ಲೆಟರ್ ತಂದೇ ತರುತ್ತಾನೆಂಬ ಭರವಸೆಯನ್ನು ಕಾವ್ಯ ವ್ಯಕ್ತಪಡಿಸಿದರು. ಒಂದು ವೇಳೆ, ಕಾವ್ಯ ಲೆಟರ್ ತಂದರೆ ಹೇಗಪ್ಪ ಎಂಬ ಅಳುಕು ಗಿಲ್ಲಿಯಲ್ಲಿ ಇತ್ತು. ಕೊನೆಗೆ ಗಿಲ್ಲಿ ಮಾತ್ರ ಲೆಟರ್ ತಂದರು. ಈ ಮೂಲಕ ಗಿಲ್ಲಿ ದೊಡ್ಮನೆಯಲ್ಲಿ ಹೀರೋ ಎನಿಸಿಕೊಂಡರು.
ಇದನ್ನೂ ಓದಿ : ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್ ಭಾಗವತ್ ಭೇಟಿ



















