ಬೆಂಗಳೂರು:ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಅಪಹರಣ ಮತ್ತು ಎರಡು ಕೊಲೆ ಪ್ರಕರಣಗಳ ಆರೋಪಿಗೆ ಬೆಂಗಳೂರು ಪೊಲೀಸರು ಗುಂಡೇಟು ನೀಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂರು ಬೊಮ್ಮಸಂದ್ರೆ ಸ್ಮಶಾನದ ಬಳಿ ಸಂಭವಿಸಿದೆ.
ಪೊಲೀಸ್ ಗುಂಡೇಟಿನಿಂದ ಆಂಧ್ರಪ್ರದೇಶ ಮೂಲದ ರವಿಪ್ರಸಾದ್ ರೆಡ್ಡಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ ಎಂಬುವರ ಕೊಲೆ ಪ್ರಕರಣದಲ್ಲಿ ರವಿಪ್ರಸಾದ್ ರೆಡ್ಡಿ ಆರೋಪಿಯಾಗಿದ್ದಾರೆ.
ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ದಾಳಿ ಮಾಡಿದ್ದಾನೆ. ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗತಿಗೆ ಎಚ್ಚರಿಕೆ ನೀಡಿದರೂ ಕೇಳದಿದ್ದಾಗ ಹಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಗುಂಡು ಹಾರಿಸಿದ್ದಾರೆ. ಆರೋಪಿಯ ಕಾಲಿಗೆ ಗುಂಡೇಟು ನೀಡಿ, ಬಳಿಕ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ



















