ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಗಗನ್ ರಾವ್ ಮೃತ ದುರ್ದೈವಿ.

ಬ್ಯಾಂಕ್ ಒಂದರ ಎಂಪ್ಲಾಯಿ ಆಗಿ ಕೆಲಸ ಮಾಡುತ್ತಿದ್ದ ಗಗನ್ ರಾವ್ಗೆ, ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮೇಘನ ಜಾದವ್ ಜೊತೆ ಮದುವೆಯಾಗಿತ್ತು. ಮದುವೆಯಾಗಿ ಕೇವಲ ಎಂಟು ತಿಂಗಳಲ್ಲಿ ಪತ್ನಿ ವಿನಾಕಾರಣ ಜಗಳವಾಡಲು ಶುರು ಮಾಡಿದ್ದಳು ಎಂಬ ಆರೋಪ ಕೇಳಿಬಂದಿದೆ.
ಮದುವೆಯ ನಂತರ ಪತ್ನಿ-ಪತಿಯ ನಡುವೆ ನಿರಂತರ ಜಗಳಗಳು ಆರಂಭವಾಗಿತ್ತು. ಇದರಿಂದ ಗಗನ್ ರಾವ್ ಮಾನಸಿಕವಾಗಿ ತುಂಬ ನೊಂದಿದ್ದ. ಪತ್ನಿಯ ಕಿರುಕುಳವೇ ಆತ್ಮಹತ್ಯೆಗೆ ಕಾರಣವೆಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತನ ತಂಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಗಗನ್ ರಾವ್ ಆತ್ಮಹತ್ಯೆ ಸುದ್ದಿ ತಿಳಿದು ಕುಟುಂಬಸ್ಥರು ಸದ್ಯ ಆಘಾತಕ್ಕೊಳಗಾಗಿದ್ದಾರೆ. ಅಣ್ಣನ ಸಾವಿಗೆ ಪತ್ನಿಯೇ ಕಾರಣ ಎಂದು ಮೃತನ ತಂಗಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ಹಿಂದಿನ ಸತ್ಯಾಸತ್ಯತೆ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ : ವಿಜಯಪುರ | ಅರಕೇರಿ ಅಮೋಘಸಿದ್ಧ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ!



















