ಉಡುಪಿ: ಯುರೋಪ್ ದೇಶದ ನರೋತ್ತಮ್ ದಾಸ್ ಮತ್ತು ಫ್ರಾನ್ಸ್ನ ಜಾನ್ನವ್ ಭಾರತದ ಆಧ್ಯಾತ್ಮಕ್ಕೆ ಮನೋಸೋತ ವಿದೇಶಿ ಪ್ರಜೆಗಳು. ಕಳೆದ ಹಲವಾರು ವರ್ಷಗಳಿಂದ ಶ್ರೀ ಕೃಷ್ಣ ದೇವರ ಭಕ್ತರಾಗಿರುವ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು.
ದೇಶದ ಹಲವಾರು ಧಾರ್ಮಿಕ ಕೇಂದ್ರಗಳನ್ನು ಭೇಟಿ ಮಾಡಿರುವ ಈ ಜೋಡಿ, ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ನಿರ್ಧರಿಸಿ,ಕೊಲ್ಲೂರು ಮೂಕಾಂಬಿಕಾ ದೇವರ ಸನ್ನಿಧಾನದಲ್ಲಿ ಇಬ್ಬರು ವಿವಾಹವಾಗಿದ್ದಾರೆ.

ಪಶ್ಚಿಮ ಘಟ್ಟದ ತಪ್ಪಲಿನ ದಳಿ ಎಂಬ ಊರಿನಲ್ಲಿ ಸರಳ ಆರತಕ್ಷತೆ ನಡೆಸಿ, ಸಂಗೀತ ಕಾರ್ಯಕ್ರಮವನ್ನು ಈ ಜೋಡಿ ಆಯೋಜಿಸಿತ್ತು. ಹಿಂದೂ ಧಾರ್ಮಿಕತೆಗೆ ಮನಸೋತಿರುವ ಈ ಜೋಡಿ ಸದ್ಯ ತಮ್ಮ ವೃತ್ತಿಯನ್ನು ತೊರೆದು ಮಥುರಾದ ಬೃಂದಾವನದಲ್ಲಿ ಶ್ರೀ ಕೃಷ್ಣದೇವರ ಸೇವೆಯನ್ನು ಮಾಡುತ್ತಿದ್ದಾರೆ.
ಇದನ್ನೂ ಓದಿ: ನ. 15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ



















