ಹೈದರಾಬಾದ್ : ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಹಗರಣದಲ್ಲಿ ತಮ್ಮದು ಯಾವುದೇ ಪಾತ್ರವಿಲ್ಲ ಎಂದು ಪ್ರಕಾಶ್ ರಾಜ್ ಈ ಹಿಂದೆಯೂ ತಿಳಿಸಿದ್ದರು. ಇಂದು ಮಾತನಾಡಿದ ಅವರು, 2016 ರಲ್ಲಿ ಬೆಟ್ಟಿಂಗ್ ಇನ್ನೂ ಪ್ರಾರಂಭವಾಗಿರಲಿಲ್ಲ. ತಾವು ಒಂದು ಆ್ಯಪ್ ಬಗ್ಗೆ ಜಾಹೀರಾತಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದೆ. ಅದು ಬೆಟ್ಟಿಂಗ್ ಆ್ಯಪ್ ಎಂದು ತಿಳಿದ ನಂತರ ಆ ಜಾಹೀರಾತಿನಿಂದ ಹಿಂದೆ ಸರಿದಿದ್ದಾಗಿದೆ. ಆದರೂ ತಪ್ಪಾಗಿದೆ. ಆದ್ದರಿಂದ ನಾನು ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
ವಿಚಾರಣೆಯ ವೇಳೆ ನಾನು ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳು, ದಾಖಲೆಗಳು ಮತ್ತು ಬ್ಯಾಂಕ್ ದಾಖಲೆಗಳನ್ನು ಎಸ್ಐಟಿ ಅಧಿಕಾರಿಗಳಿಗೆ ಒದಗಿಸಿದ್ದೇನೆ. ಬೆಟ್ಟಿಂಗ್ ಆ್ಯಪ್ಗಳು ಮತ್ತು ಗೇಮಿಂಗ್ ಆ್ಯಪ್ಗಳಲ್ಲಿ ಹೂಡಿಕೆ ಮಾಡುವ ಮೂಲಕ ಅನೇಕ ಯುವಕರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬಗಳು ಬಳಲುತ್ತಿವೆ. ಕಠಿಣ ಪರಿಶ್ರಮ ಮಾತ್ರ ಫಲ ನೀಡುತ್ತದೆ. ಕಷ್ಟಪಟ್ಟು ದುಡಿದರೆ ಮಾತ್ರ ಹಣ ಬರುತ್ತದೆ. ಆದ್ದರಿಂದ ನಾವೆಲ್ಲರೂ ದುಡಿಯೋಣ. ದಯವಿಟ್ಟು ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿ. ಭವಿಷ್ಯದಲ್ಲಿ ನಾನು ಅಂತಹ ತಪ್ಪನ್ನು ಮಾಡುವುದಿಲ್ಲ ಎಂದು ಪ್ರಕಾಶ್ ರಾಜ್ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ : ನನಗೆ ಎಕ್ಸಿಟ್ ಪೋಲ್ನಲ್ಲಿ ನಂಬಿಕೆಯಿಲ್ಲ, ಬಿಹಾರದಲ್ಲಿ ಮಹಾಘಟಬಂಧನವೇ ಅಧಿಕಾರಕ್ಕೆ | ಡಿಸಿಎಂ ಡಿ.ಕೆ ಶಿವಕುಮಾರ್ ವಿಶ್ವಾಸ!



















