ಬೆಂಗಳೂರು : ಬೈಕ್ನಲ್ಲಿ ತೆರಳುವಾಗ ಫ್ಲೆಕ್ಸ್ ತಗುಲಿ ರಸ್ತೆಗೆ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಬೆಸ್ಕಾಂ ಕಚೇರಿಯ ಮುಂದೆ ನಡೆದಿದೆ. ತೇಜಸ್ ಗೌಡ(27) ಮೃತ ಯುವಕ.
ಈತ ಜರ್ಮನಿಯಲ್ಲಿ ಎಂಎಸ್ ಮಾಡುತ್ತಿದ್ದು, ರಜೆಗೆ ನೆಲಮಂಗಲದ ತನ್ನ ಮನೆಗೆ ಬಂದಿದ್ದನು. ರಸ್ತೆಯಲ್ಲಿ ತೆರಳುವಾಗ ರಸ್ತೆಯ ಪಕ್ಕದಲ್ಲಿ ಕಟ್ಟಿದ್ದ ಪ್ಲೆಕ್ಸ್ಗೆ ಬೈಕ್ ಟಚ್ ಆಗಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ತೇಜಸ್ ನನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ ತೇಜಸ್ ಗೌಡ, ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಜೀವನ್ಮರಣ ಹೋರಾಟ ನಡೆಸಿ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿಯೂ ಸೆರೆಯಾಗಿದೆ. ಇನ್ನು ನೆಲಮಂಗಲ ನಗರಸಭೆಯ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿರುವುದಾಗಿ ಸಾರ್ವಜನಿಕರು ಆಕ್ರೋಶಿಸಿದ್ದಾರೆ. ಇದೀಗ ನೆಲಮಂಗಲ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವಿಧಾನಸೌಧದ ಮುಂದೆ ನೇಪಾಳಿ ಗ್ಯಾಂಗ್ ಹೊಡೆದಾಟ ಕೇಸ್ | 11 ಆರೋಪಿಗಳ ಬಂಧನ!



















