ಜಾರ್ಖಂಡ್ : ಹೊಲದಲ್ಲಿ ಪತ್ತೆಯಾದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯ ಹನ್ಸ್ದಿಹಾ ಬರ್ದೇಹಿ ಗ್ರಾಮದಲ್ಲಿ ಇಂದು ಬೆಳಕಿಗೆ ಬಂದಿದೆ.
ಮೃತರನ್ನು ಬೀರೇಂದ್ರ ಕುಮಾರ್ (32), ಇವರ ಪತ್ನಿ ಆರತಿ ಕುಮಾರಿ (27) ಮತ್ತು ಮಕ್ಕಳಾದ ವಿರಾಜ್ ಕುಮಾರ್ (2), ರುಹಿ ಕುಮಾರಿ (4) ಎಂದು ಗುರುತಿಸಲಾಗಿದೆ.
ದುಮ್ಕಾ ಜಿಲ್ಲಾ ಕೇಂದ್ರದಿಂದ ಸುಮಾರು 45 ಕಿಲೋ ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪತಿ, ಪತ್ನಿ ಮತ್ತು ಅವರ ಇಬ್ಬರು ಮಕ್ಕಳ ಶವಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ತನಿಖೆ ಮುಂದುವರೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಪತ್ನಿ ಮತ್ತು ಇಬ್ಬರ ಮಕ್ಕಳ ಶವಗಳನ್ನು ಅವರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ. ಪತಿಯ ಶವ ಮನೆಯಿಂದ ಸ್ವಲ್ಪ ದೂರದಲ್ಲಿರುವ ಹೊಲದಲ್ಲಿ ಪತ್ತೆಯಾಗಿದ್ದು, ಆತನ ಕುತ್ತಿಗೆಯಲ್ಲಿ ಹಗ್ಗದ ಗುರುತುಗಳಿವೆ.
ಇದನ್ನೂ ಓದಿ : ‘ಕೆಲವರಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನ ನಾನೋಪ್ಪಲ್ಲ : ಪರೋಕ್ಷವಾಗಿ ಡಿಕೆಶಿಗೆ ಟಾಂಗ್ ಕೊಟ್ಟ ಸತೀಶ್



















