ಬೆಂಗಳೂರು: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆ.
ಅಮೂಲ್ಯ ನೇಣಿಗೆ ಶರಣಾದ ವಿವಾಹಿತೆ. ಅಮೂಲ್ಯ-ಅಭಿಷೇಕ್ ಪ್ರೇಮಕ್ಕೆ ಮನೆಯವರ ವಿರೋಧವಿತ್ತು. ಕೊನೆಗೆ ಹೇಗೋ ಇಬ್ಬರು ಕುಟುಂಬದವರನ್ನು ಒಪ್ಪಸಿ ಮೂರು ತಿಂಗಳ ಹಿಂದಷ್ಟೇ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನ ಮೂಡಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಮೃತ ಅಮೂಲ್ಯ ಕುಟುಂಬಸ್ಥರು ಮಗಳ ಸಾವಿಗೆ ಪತಿ ಅಭಿಷೇಕ್ ಕಾರಣ ಎಂದು ಆರೋಪಿಸಿದ್ದಾರೆ. ಪತಿಗೆ ಪತ್ನಿಯ ಮೇಲೆ ಅನುಮಾನ ಇತ್ತು, ಯಾರ ಜೊತೆಗೂ ಮಾತನಾಡುವುದಕ್ಕೂ ಬಿಡುತ್ತಾ ಇರಲಿಲ್ಲ. ಆಡುಗೆ ಮಾಡುವುದಕ್ಕೆ ಬರುವುದಿಲ್ಲ ಎಂದು ಕಿರುಕುಳ ಕೊಡುತ್ತಿದ್ದರು. ಅವರೇ ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪತಿ ಅಭಿಷೇಕ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ | ಭಕ್ತರೊಂದಿಗೆ ಆಟವಾಡುತ್ತಿದ್ದಾಗ ಅಡ್ಡಬಂದ ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ!



















